BREAKING

Dropdown with Dependent Values
Uncategorized

ನಟ ದರ್ಶನ್‌ ಜಾಮೀನು ಅರ್ಜಿ ಅಕ್ಟೋಬರ್ 28ಕ್ಕೆ ಮುಂದೂಡಿಕೆ

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಡೆಯಿತು. ಈ ವೇಳೆ ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿವಿ ನಾಗೇಶ್, ನಟ ದರ್ಶನ್ ಗೆ ಬೆನ್ನು ಹುರಿ ನೋವಿದೆ. ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ. ದರ್ಶನ್ ಗೆ ಬೆನ್ನು ಹುರಿಯ ಸರ್ಜರಿ ಮಾಡಬೇಕೆಂದು ಹೇಳಲಾಗಿದೆ. ಹೀಗಾಗಿ ಅನಾರೋಗ್ಯ ಕಾರಣಕ್ಕೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಜೈಲು ಅಧಿಕಾರಿಗಳಿಂದ ವೈದ್ಯಕೀಯ ವರದಿ ಕೇಳಿದ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿದೆ.

.

Leave A Reply

Your email address will not be published. Required fields are marked *

Related Posts